ಗುರು ದುನಿಯಾ
ಕಣ್ಣಿಗೆ ಕಂಡದ್ದು , ಮನಸಿಗೆ ತೋಚಿದ್ದು..... ಹೀಗಿದೆ ನೋಡು ಗೆಳೆಯ....
Friday 28 October 2011
ನೀನೆ
ತುಂಬಿರುವ ಮನಸಿಗೆ
ತಿವಿಯಬೇಡ ಗೆಳತಿ
ನಿನ್ನ ಮೌನದ ಈಟಿಯಿಂದ
ನಿನ್ನ
ಮೃದು ಮಧುರ
ನೆನಪುಗಳಿಗೆ ನೋವಾಗಿ
ಹೊರಟು ಬಿಟ್ಟಾವು ಅಲ್ಲಿಂದ ...
ನಾನು ಮರ
ನೀನು ಬಳ್ಳಿ
ಹಬ್ಬಿದಷ್ಟು ಎತ್ತರ
ತಬ್ಬಿದಷ್ಟು ಮಧುರ
ಅದರೂ ....
ನಮ್ಮ ನಡುವೆ
ಏ
ಕಿ
ಷ್ಟು
ಅಂತರ ...?
ಕಣ್ಣಲ್ಲಿ
ಇರಿಯುವುದಿಲ್ಲ
ಮಾತಲ್ಲಿ
ತಿವಿಯುವುದಿಲ್ಲ
ಎದುರಾದಾಗಲೆಲ್ಲ
ಸುಮ್ಮನೆ
ನಗುತ್ತಾಳೆ
ಕೊಲ್ಲುವ ಕಲೆ
ಅವಳಿಗೆ ಕರಗತ
Newer Posts
Older Posts
Home
Subscribe to:
Posts (Atom)