Sunday 30 October 2011

ಅಲೆದದ್ದು ಸಾಕು
ಬಿಕನಾಸಿಯಂತೆ
ಪಕ್ಕಕ್ಕೆ ಒಬ್ಬಳು ಬರಲಿ
ಎಂದರು ಮನೆಯವರು
ದಿಕ್ಕಿಲ್ಲದ ಮನೆ ಹುಡುಗಿ
ಸುರ ಸುಂದರಿ
ಹುಡುಗ ಹೇಗೆ ?
ಕೇಳಲಿಲ್ಲ ಅವರು
ಇವರು ಹೇಳಲಿಲ್ಲ
ಕೆಲಸ
ಜಾಸ್ತಿ ಅವನಿಗೆ
ಬಾರು ,ಪಬ್ಬು ,ಸಿಗರೇಟು
ಇಸ್ಪೀಟು ಅಡ್ದೆಯಲಿ
ಥೇಟ್ ಧರ್ಮರಾಯ
ಅದರೂ ನಮ್ಮ ಹುಡುಗ
ಪುಟಕ್ಕಿಟ್ಟ ಚಿನ್ನ
(ಸ್ವಗತ) ಒತ್ತೆಯಿಟ್ಟ ಚಿನ್ನ
ಇನ್ನು ಬಿಡಿಸಿಕೊಂಡಿಲ್ಲ
ಒಳಮನೆಯಲ್ಲಿ
ಹುಡುಗಿ
ಕಣ್ಣೀರಿಡುತ್ತಿದೆ
ಪಡಸಾಲೆಯ ಮಂದಿಗೆ
ಮುಖವಿಲ್ಲ
ಸುಮ್ಮನೆ ಬಿಂಕದ ಮಾತು
ಇಲ್ಲೇನು ಕಡಿಮೆ ನಿನಗೆ
ಎಲ್ಲವು ಇದೆ
ಬೇಕಾದ್ದು ಬಿಟ್ಟು
ತುಟಿಗೆ ಬಂದ ಮಾತು
ಗಂಟಲಲ್ಲೇ ಉಳಿಯುತ್ತದೆ
ಈಗೀಗ
ಹುಡುಗಿ ನಗುವುದನ್ನು
ರೂಡಿ ಮಾಡಿಕೊಂಡಿದೆ
ಲೋಕದ ಕಣ್ಣಿಗೆ ಮಾತ್ರ
ದೊಡ್ಡವರ ಮನೆ ಜನ
ಅವಳ ಕಣ್ಣೀರನ್ನು
ಪ್ರತಿಷ್ಠೆಯ ಮುಖವಾಡದ
ಹಿಂದೆ ಬಚ್ಚಿಡಲಾಗಿದೆ
ಅವಳ
ಪ್ರಶ್ನೆಗಳಿಗೆ
ಅವನಲ್ಲಿ ಉತ್ತರವಿಲ್ಲ
ಅವಳ
ಮೌನ ಮತ್ತು ನಗುವನ್ನು
ಎದುರಿಸಲು ದೈರ್ಯವು ಇಲ್ಲ
.

ಬೆಂಗಳೂರು

ಇಲ್ಲಿ
ಬದುಕು ದುಬಾರಿ
ಸಾವು ಬಿಕಾರಿ